ಶಿವಮೊಗ್ಗ (ಆ.17): ನಾನೀಗ ದೊಡ್ಡ ಮನುಷ್ಯನಾಗಿದ್ದೇನೆ. ನನಗೆ ನಿಮ್ಮ ಜೊತೆ ಮಾತನಾಡಲೂ ವ್ಯವಸ್ಥೆ ಬಿಡುತ್ತಿಲ್ಲ. ಆರಂಭದ ಒಂದೆರಡು ದಿನ ಏನೋ ಒಂಥರಾ ಖುಷಿಯಾಗಿತ್ತು. ಈಗ ಕಿರಿಕಿರಿಯಾಗುತ್ತಿದೆ. ಹಾರಾಡ್ಕೊಂಡು, ಓಡಾಡ್ಕೊಂಡು ಇದ್ದ ನನಗೀಗ ಕಬ್ಬಿಣದ ಕೋಟೆ ಕಟ್ಟಲಾಗಿದೆ ಎಂಬ ಭಾವ ಬರುತ್ತಿದೆ. ದಯವಿಟ್ಟು ಯಾರೂ ಅನ್ಯಥಾ ಭಾವಿಸಬಾರದು ಎಂದು ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಅನುಭವನ್ನು ಹಂಚಿಕೊಂಡರು.