ನಾಮಪತ್ರ ತಿರಸ್ಕಾರ ಮಾಡುತ್ತಾರೆ ಎಂದುಕೊಂಡು ನಿರೀಕ್ಷಣಾ ಆದೇಶ ನೀಡಲು ಕೋರ್ಟ್ ಮೆಟ್ಟಿಲೇರಿದ ಅಭ್ಯರ್ಥಿಗೆ ನ್ಯಾಯಾಲಯ ಚೀಮಾರಿ ಹಾಕಿದೆ.ತಮ್ಮ ನಾಮಪತ್ರ ತಿರಸ್ಕಾರ ಮಾಡುತ್ತಾರೆ ಎಂದುಕೊಂಡು ಕೋರ್ಟ ಮೆಟ್ಟಿಲೇರಿದ್ದವರಿಗೆ ನ್ಯಾಯಾಲಯ ಛೀಮಾರಿ ಹಾಕಿದೆ. ಅಷ್ಟೇ ಅಲ್ಲ 50 ಸಾವಿರ ರೂ. ದಂಡ ವಿಧಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠದಿಂದ 50 ಸಾವಿರ ರೂ. ದಂಡ ವಿಧಿಸಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ನಗರಸಭೆ 22ವಾರ್ಡ್ ಗೆ ಸ್ಪರ್ಧಿಸಿದ್ದ ಪುಷ್ಪಾ ಸಂಜೀವಮೂರ್ತಿ ದಂಡದ ಶಿಕ್ಷೆಗೆ ಗುರಿಯಾದವರು.