ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಪೂರ್ವಾಶ್ರಮದ ಕುರಿತು ಸಚಿವ ಸಿ.ಸಿ.ಪಾಟೀಲ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಖಂಡಿಸಿ ಭಕ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಏಪ್ರಿಲ್ 27ರೊಳಗೆ ಸಚಿವರು ತಮ್ಮ ಆರೋಪಕ್ಕೆ ವಿವರಣೆ ಒದಗಿಸಬೇಕು. ಇಲ್ಲದಿದ್ದರೆ ಅವರ ಮನೆಯ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ದಿಂಗಾಲೇಶ್ವರ ಸ್ವಾಮೀಜಿ ಎಚ್ಚರಿಸಿದ್ದರು. ಅದರಂತೆ ಇಂದು ನರಗುಂದ ಪಟ್ಟಣದತ್ತ ದಿಂಗಾಲೇಶ್ವರ ಸ್ವಾಮೀಜಿಯ ಭಕ್ತರ ಸಂಚಾರ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬಂತು. ಶ್ರೀಗಳನ್ನು ತಡೆಯಲು ನಗರದ ಸುತ್ತಮುತ್ತಲ ಕಲಕೇರಿ, ಕುರ್ಲಗೇ