ಬಾಗಲಕೋಟೆ : ಬಿಜೆಪಿಯ ನಗರ ಘಟಕದ ಅಧ್ಯಕ್ಷರು ಹಾಗೂ ಅವರ ಸಹಚರರು ಸೇರಿ ಬಿಜೆಪಿ ಕಾರ್ಯಕರ್ತರೊಬ್ಬರ ಮೇಲೆ ಸೋಮವಾರ ತಡರಾತ್ರಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಮಖಂಡಿ ನಗರದ ಕಲೂತಿ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಉಮೇಶ್ ಅಲಮೇಲಕರ್ ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತ, ಶ್ರೀಧರ ಕೊಣ್ಣೂರ ಹಲ್ಲೆ ಮಾಡಿದ ಜಮಖಂಡಿ ಬಿಜೆಪಿಯ ನಗರ ಘಟಕದ ಅಧ್ಯಕ್ಷ. ಜಮಖಂಡಿ ಉಪಚುನಾವಣೆ ವೇಳೆ ಇವರಿಬ್ಬರ ನಡುವೆ ಮನಸ್ತಾಪ ಶುರುವಾಗಿತ್ತು. ಇದೇ ಕೋಪಕ್ಕೆ ಸೋಮವಾರ