ತುಮಕೂರು : ಬಿಜೆಪಿಯವರು ಸಾಮಾಜಿಕ ನ್ಯಾಯ ಕೊಡುವುದರಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಬಿಜೆಪಿ ಪಕ್ಷಕ್ಕೆ ಸಾಮಾಜಿಕ ನ್ಯಾಯ ನೀಡುವ ಬದ್ಧತೆ ಇಲ್ಲ. ಅವರ ಅಜೆಂಡಾದಲ್ಲಿಯೇ ಅದು ಇಲ್ಲ. ಅವರ ದೃಷ್ಟಿಕೋನವೇ ಬೇರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.