ತುಮಕೂರು : ಬಿಜೆಪಿಯವರು ಸಾಮಾಜಿಕ ನ್ಯಾಯ ಕೊಡುವುದರಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಬಿಜೆಪಿ ಪಕ್ಷಕ್ಕೆ ಸಾಮಾಜಿಕ ನ್ಯಾಯ ನೀಡುವ ಬದ್ಧತೆ ಇಲ್ಲ. ಅವರ ಅಜೆಂಡಾದಲ್ಲಿಯೇ ಅದು ಇಲ್ಲ. ಅವರ ದೃಷ್ಟಿಕೋನವೇ ಬೇರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಹಿನ್ನೆಲೆ ತುಮಕೂರಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿ ಸಾಮಾಜಿಕ ನ್ಯಾಯದ ವಿರೋಧಿಯಾಗಿದೆ. ಕಾಂಗ್ರೆಸ್ ಯವತ್ತೂ ಬಡವರ ಪರವಾಗಿದೆ.