ಬಿಜೆಪಿಯವರಿಗೆ ಸುಳ್ಳು ಹೇಳುವುದೇ ಕಸುಬಾಗಿದೆ. ಸುಳ್ಳು ಆರೋಪಗಳನ್ನು ಮಾಡಿ ಸರಕಾರದ ತೇಜೋವಧೆಗೆ ಮುಂದಾಗಿದೆ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆತ್ಮಹತ್ಯೆಗೆ ಶರಣಾದ ಡಿವೈಎಸ್ಪಿ ಎಂ.ಕೆ. ಗಣಪತಿಯವರ ಫೋನ್ಕಾಲ್ಗಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ಒಂದು ವೇಳೆ ಪುರಾವೆಗಳಿದ್ದಲ್ಲಿ ತೋರಿಸಲಿ. ಇಲ್ಲವಾದಲ್ಲಿ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಕೋರ್ಟ್ಗೆ ಪುರಾವೆಗಳನ್ನು ಸಲ್ಲಿಸಲಿ ಎಂದು ಸವಾಲ್ ಹಾಕಿದ್ದಾರೆ. ಗಣಪತಿ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಸಾಕ್ಷ್ಯಗಳನ್ನು ತಿರುಚಲಾಗಿದೆ ಎನ್ನುವ ಆರೋಪಗಳಲ್ಲಿ