ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲು ಹೋದ ಅಭ್ಯರ್ಥಿ ಮತ್ತು ಸೂಚಕರ ಮೇಲೆ ಹಲ್ಲೆ ನಡೆದಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನ ಸಭಾ ಕ್ಷೇತ್ರದಲ್ಲಿ ಆಯ್ಕೆ ಬಯಸಿದ್ದ ವಿರೇಶ ಸಜ್ಜನ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆಯಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಜೆಪಿ ಅಭ್ಯರ್ಥಿ ಹಾಲಪ್ಪ ಆಚಾರ ಬೆಂಬಲಿಗರಾದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಅರವಿಂದಗೌಡ, ಯಲಬುರ್ಗಾ ಬಿಜೆಪಿ ಮಂಡಲದ ಅಧ್ಯಕ್ಷ ರತನ್ ದೇಸಾಯಿ ಅವರಿಂದ ಹಲ್ಲೆ ನಡೆದಿದೆ.