ಬಿಜೆಪಿ ನಾಯಕರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶಂಸಿಸಿದ ಘಟನೆ ಶುಕ್ರವಾರ ಯಲಹಂಕದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ನಡೆದಿದೆ. ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಹಾಗೂ ದಾಸರಹಳ್ಳಿ ಶಾಸಕ ಮುನಿರಾಜು ಡಿಕೆಶಿ ಕಾರ್ಯವೈಖರಿಯ ಬಗ್ಗೆ ಮುಕ್ತಕಂಠದಿಂದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಹರ್ನಿಶಿ ಶ್ರಮಿಸುತ್ತಿದ್ದಾರೆ. ಇದರಿಂದಾಗಿ ಬೆಂಗಳೂರಿನ ಬಹುತೇಕ ಸಮಸ್ಯೆಗಳು ನಿವಾರಣೆಯಾಗಲಿವೆ ಎಂದು ಬಿಡಿಎ ಮಾಜಿ ಅಧ್ಯಕ್ಷ, ಶಾಸಕ ಎಸ್.ಆರ್ ವಿಶ್ವನಾಥ್