ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿಯಲ್ಲಿ ಹಲವಾರು ನಾಯಕರಿದ್ದರೂ ಶೋಭಾ ಕರಂದ್ಲಾಜೆ ಮತ್ತು ಆರ್.ಅಶೋಕ್ಗೆ ಮಾತ್ರ ಯಾಕೆ ಮಣೆ ಹಾಕಲಾಗುತ್ತದೆ? ಎಂದು ಪ್ರಶ್ನಿಸಿ ಪಕ್ಷದಲ್ಲಿ ಇತರ ನಾಯಕರಿಲ್ಲವೇ ಎಂದು ವಾಗ್ದಾಳಿ ನಡೆಸಿದ್ದಾರೆ. ನವಕರ್ನಾಟಕ ಪರಿವರ್ತನಾ ಯಾತ್ರೆಯ ಹೊಣೆಯನ್ನು ಅಶೋಕ್ಗೆ ವಹಿಸಲಾಗಿದೆ. ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಕರಂದ್ಲಾಜೆಗೆ ಹೊಣೆ ವಹಿಸಲಾಗಿದೆ. ಬೇರೆ ನಾಯಕರು ಪಕ್ಷದಲ್ಲಿ ಇಲ್ಲವೇ ಎಂದು ಗುಡುಗಿದ್ದಾರೆ.