ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಇಡುವ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ವೈದ್ಯರ ಮೇಲೆ ಹಲ್ಲೆಗೈದ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಸಮರ್ಥಿಸಿಕೊಳ್ಳುವ ಮೂಲಕ ಬಿಜೆಪಿ ನಾಯಕರು ಗೂಂಡಾ ಪ್ರವೃತ್ತಿ ತೋರಿಸಿದ್ದಾರೆ. ಈ ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಣಾಜೆಯಲ್ಲಿ ನಡೆದ ಕಾರ್ತಿಕ್ರಾಜ್ ಕೊಲೆ ಪ್ರಕರಣ ಸಂಬಂಧ