ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸೀಟುಗಳನ್ನ ಪಡೆದು ಅಭೂತಪೂರ್ವ ಗೆಲುವಿನೊಂದಿಗೆ ಅಧಿಕಾರಕ್ಕೇರಿದ್ದು, ಇದೀಗ ಸಿದ್ದರಾಮಯ್ಯನವರ ಸರ್ಕಾರದ ವಿರುದ್ಧ ಮೊದಲ ಪ್ರತಿಭಟನೆಗೆ ರಾಜ್ಯ BJP ಕರೆ ನೀಡಿದೆ. ಕರ್ನಾಟಕ ಸರ್ಕಾರದ ಮೂರು ಜನ ವಿರೋಧಿ ನಿರ್ಧಾರಗಳನ್ನು ವಾಪಸ್ ಪಡೆಯಲು ಆಗ್ರಹಿಸಿ ಬಿಜೆಪಿ ವತಿಯಿಂದ ಇಂದು ಮತ್ತು ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದೆ. ಈ ಬಗ್ಗೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದ್ದಾರೆ.