ಬೆಂಗಳೂರು: ಚುನಾವಣೆ ಹಿನ್ನಲೆಯಲ್ಲಿ ಬೆಂಗಳೂರು ಮತದಾರರನ್ನು ಸೆಳೆಯಲು ಬಿಜೆಪಿ ತಂತ್ರ ರೂಪಿಸಿದ್ದು ಇಂದಿನಿಂದ ಬೆಂಗಳೂರು ರಕ್ಷಾ ಪಾದ ಯಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದೆ.ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದ ಬಳಿಯಿಂದ ವಿಶೇಷ ವಾಹನಕ್ಕೆ ಹಸಿರು ನಿಶಾನೆ ತೋರಿದ ಬಿಜೆಪಿ ನಾಯಕ ಆರ್. ಅಶೋಕ್ ಪಾದ ಯಾತ್ರೆಗೆ ಈ ಮೂಲಕ ಚಾಲನೆ ನೀಡಿದ್ದಾರೆ.ಪ್ರತಿ ನಿತ್ಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಪಾದ ಯಾತ್ರೆ ಕೈಗೊಳ್ಳಲಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತದ ವೈಫಲ್ಯಗಳ ಬಗ್ಗೆ