ಕಾರವಾರ : ಅರಬ್ಬೀ ಸಮುದ್ರದಲ್ಲಿ ಅಬ್ಬರದ ಗಾಳಿ ಹಾಗೂ ಅಲೆಗಳ ಹೊಡೆತಕ್ಕೆ ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು 12 ಮೀನುಗಾರರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನಲ್ಲಿ ನಡೆದಿದೆ. ಮಂಗಳವಾರ ಅಂಕೋಲದ ಬೆಳ್ಳಂಬಾರಿನ ಕಡಲ ತೀರದಿಂದ ಅರಬ್ಬೀ ಸಮುದ್ರಕ್ಕೆ ಚಂದ್ರಾವತಿ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳಿತ್ತು. ಸುಭಾಷ್ ಖಾರ್ವಿ ಎಂಬವರಿಗೆ ಸೇರಿದ ಪರ್ಶಿಯನ್ ಬೋಟ್ ಇದಾಗಿತ್ತು. ಹವಾಮಾನ ವೈಪರಿತ್ಯದಿಂದಾಗಿ ಸಮುದ್ರದಲ್ಲಿ ಹೆಚ್ಚಿನ ಗಾಳಿ