ಹುಬ್ಬಳ್ಳಿ: ದಾವಣಗೆರೆಯಲ್ಲಿ ನಡೆದ ರೈತ ಸಮಾವೇಶಕ್ಕೆ ಬಂದ ಪ್ರಧಾನಿ ಮೋದಿಗೆ ಅದ್ಭುತ ಸ್ವಾಗತ ದೊರಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಜನ್ಮ ದಿನದಂದು ನಡೆದ ಸಮಾವೇಶದಲ್ಲಿ ಬಿಜೆಪಿ ಹೊಸ ಕಾರ್ಯಕ್ರಮಕ್ಕೆ ಚಾಲನೆ ನೀಡಿತು. ಸಮಾವೇಶದಲ್ಲಿ ಮುಷ್ಠಿ ಅಕ್ಕಿ ಯೋಜನೆಗೆ ಚಾಲನೆ ನೀಡಲಾಯಿತು. ಈ ವೇಳೆ ಭಾಷಣ ಮಾಡಿದ ಪ್ರಧಾನಿ ಮೋದಿ ನೇರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ಧ ರಾಮಯ್ಯ ಎಂದರೆ ಸಿದ್ಧ ರೂಪಯಾ ಎಂದು ವ್ಯಂಗ್ಯ ಮಾಡಿದರು.