ಬಜೆಟ್ ನಲ್ಲಿ ಎಲ್ಲ ಜಿಲ್ಲೆಗಳಿಗೆ ಸಮಪಾಲು ಕೊಟ್ಟಿದ್ದೇನೆ. ಉತ್ತರ ಕರ್ನಾಟಕದ ಜನರಿಗೆ ನಾನು ಯಾವುದೇ ಅನ್ಯಾಯ ಮಾಡಿಲ್ಲಾ. ಬಿಜೆಪಿ ನಾಯಕರು ಇರುವ ಜಾಗಕ್ಕೆ ನಾನೇ ಹೋಗುತ್ತೇನೆ. ಈ ಬಗ್ಗೆ ಬಿಜೆಪಿಯವರು ಚರ್ಚೆಗೆ ಬರಲಿ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಎಬಿವಿಪಿ ಮೂಲಕ ಬಿಜೆಪಿ ಯವರು ಬಸ್ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ನನ್ನ ಬಳಿ ಅಷ್ಟು ಸುಲಭವಾಗಿ ರಾಜಕೀಯ ನಡೆಯಲ್ಲ. ಈ ಸರಕಾರ ಆರು ವರೆ