ಬೆಳಗಾವಿ : ಗ್ಯಾರಂಟಿ ಯೋಜನೆಗಳ ಆ್ಯಪ್ಗಳನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಫಲಾನುಭವಿಗಳಾಗಲು ಜನರು ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದಾರೆ. ಆದರೆ ಎಲ್ಲೆಡೆ ಸರ್ವರ್ ಡೌನ್ ಸಮಸ್ಯೆ ಎದುರಾಗುತ್ತಿದೆ. ಇದರಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ಸತೀಶ್ ಜಾರಕಿಹೊಳಿ ಸರ್ವರ್ ಡೌನ್ ಆಗಲು ಕೇಂದ್ರ ಸರ್ಕಾರವೇ ಕಾರಣ ಎಂದು ಹೇಳಿದ್ದಾರೆ.ನಗರದಲ್ಲಿ