ಬೆಂಗಳೂರು: ಬಡವರು, ಮಧ್ಯಮ ವರ್ಗದವರಿಗೆ ಅತಿ ಹೆಚ್ಚಿನ ಅನುಕೂಲತೆಗಳನ್ನು ಮಾಡಿಕೊಟ್ಟಿರುವ ಈ ಬಜೆಟ್ ರಾಷ್ಟ್ರದ ಜನತೆಗೆ ಖುಷಿ ತಂದಿದೆ. ಪರಿಶಿಷ್ಟ ಜಾತಿ ವರ್ಗಗಳಿಗೆ, ಕಾರ್ಖಾನೆ, ಸ್ಟಾರ್ಟಪ್ಗಳನ್ನು ಮಾಡುವವರಿಗೆ 20,000 ಕೋಟಿ ರೂ. ಸಾಲವಾಗಿ ಕೊಡುವ, ಅನುದಾನ ಕೊಡುವ ಪ್ರಸ್ತಾವ ಸ್ವಾಗತಾರ್ಹ. ಹಿಂದೆಂದೂ ಇಲ್ಲದಂತಹ ಈ ಪ್ರಸ್ತಾವದಿಂದ ಪರಿಶಿಷ್ಟ ಜಾತಿ ವರ್ಗದವರಿಗೆ, ವಿಶೇಷವಾಗಿ ಯುವಕರಿಗೆ ಬಹಳ ಅನುಕೂಲ ಆಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹೇಳಿದರು.