ಬೆಂಗಳೂರು ಮಹಾನಗರ ದಕ್ಷಿಣ ವಲಯ ಜಯನಗರ ಹಾಗೂ ಪದ್ಮನಾಭನಗರ ವ್ಯಾಪ್ತಿಯಲ್ಲಿ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ಜಗದ್ಗುರು ಶ್ರೀಶಿವರಾತ್ರೀಶ್ವರ ವೃತ್ತ(ಜಿ.ಎಸ್.ಎಸ್ ವೃತ್ತ)ದಿಂದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊಸದಾಗಿ ಡಾಂಬರೀಕರಣ ಮಾಡಿದ್ದು, ಅದನ್ನು ಪರಿಶೀಲಿಸಿ ಗುಣಮಟ್ಟ ಸರಿಯಾಗಿರುವಂತೆ ನೋಡಿಕೊಳ್ಳಬೇಕು. ಜೊತೆಗೆ ರಸ್ತೆ ಹಗೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡು ಪ್ಲಾಸ್ಟಿಕ್ ಸಾಮಗ್ರಿಗಳನ್ನು ಇರಿಸಿದ್ದ ಮಳಿಗೆಯ