ಮಲೆನಾಡು ಭಾಗದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಈಗಾಗಲೇ ಮಳೆಯ ಅಬ್ಬರಕ್ಕೆ ಅಪಾರ ಆಸ್ತಿಪಾಸ್ತಿ ಹಾಗೂ ಸಾವು ನೋವುಗಳು ಸಂಭವಿಸಿದೆ. ಮಳೆ ಮುಂದುವರಿಯುವ ಹಿನ್ನೆಲೆ ಮೂಡಿಗೆರೆ ತಾಲೂಕಿನಲ್ಲಿ ಅಂಗನವಾಡಿಯಿಂದ ಹತ್ತನೇ ತರಗತಿವರೆಗೆ ರಜೆ ನೀಡಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆಗೆ ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಗ್ರಾಮ ರಸ್ತೆ ಬಿರುಸಿನಿಂದ ಹರಿಯುತ್ತಿರುವ