ಮದ್ಯಾಹ್ನದ ಬಿಸಿಯೂಟ ಊಟ ಮಾಡಲು ಆ ಜಿಲ್ಲೆಯ ಸರಕಾರಿ ಶಾಲೆ ಮಕ್ಕಳು ಹಿಂದೇಟು ಹಾಕುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಸರ್ಕಾರಿ ಶಾಲೆ ಮಕ್ಕಳು ಬಿಸಿಯೂಟಕ್ಕೆ ಹಿಂದೇಟು ಹಾಕ್ತಿದ್ದಾರೆ. ಕಾರಣ ಬಿಸಿಯೂಟ ಸೇವಿಸಿದ ಮಕ್ಕಳು ಅಸ್ವಸ್ಥರಾಗ್ತಾ ಇರೋ ಘಟನೆಗಳು ಒಂದಾದ ಮೇಲೊಂದರಂತೆ ನಡೀತಾ ಇವೆ. ಕಳೆದ ವಾರವಷ್ಟೇ ಹಗರಿಬೊಮ್ಮನಹಳ್ಳಿ ತಾಲೂಕಿನ ಗದ್ದಿಕೇರಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಉಂಡು 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದರು.ಈಗ ಅಂತದ್ದೇ ಘಟನೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಆಗಲೂರಿನಲ್ಲಿ