ಬೆಂಗಳೂರು :ಕೆ.ಆರ್. ನಗರದಿಂದ ಕಾರ್ಯಕರ್ತರಾಗಿ ನಿಗಮ ಮಂಡಳಿಗೆ ಆಯ್ಕೆಯಾಗಿದ್ದ ಐಶ್ವರ್ಯಾ ಮಹದೇವ್ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಇದಕ್ಕೆ ಶಾಸಕರ ತೀವ್ರ ವಿರೋಧವೇ ಕಾರಣವೆನ್ನಲಾಗಿದೆ. ಈ ಮುನ್ನ 34 ಅಭ್ಯರ್ಥಿಗಳ ಪಟ್ಟಿಯೊಂದನ್ನು ಸಿದ್ದಪಡಿಸಲಾಗಿತ್ತು. ಈ ಪಟ್ಟಿಯಲ್ಲಿ ಐಶ್ವರ್ಯ ಮಹದೇವ್ ಹೆಸರೂ ಸಹ ಸೇರ್ಪಡೆಯಾಗತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಕೆ.ಆರ್.ನಗರ ಶಾಸಕ ರವಿಶಂಕರ್, ಐಶ್ವರ್ಯ ಮಹದೇವ್ ಹೆಸರು ಕೈಬಿಡದಿದ್ದರೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು.