ಬೆಂಗಳೂರು : ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ವಿಚಾರಣೆಗೆ ಜು.19ರಂದು ಹಾಜರಾಗುವುದಾಗಿ ಮನವಿ ಸಲ್ಲಿಸಿದ್ದರೂ ಕೂಡ ರೋಷನ್ ಬೇಗ್ ಅವರನ್ನು ಎಸ್ ಐ ಟಿ ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡಿರುವ ಹಿನ್ನಲೆ ಬಿಜೆಪಿ ಶಾಸಕ ರೇಣುಕಾಚಾರ್ಯ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಅಧಿಕಾರ ಉಳಿಸಿಕೊಳ್ಳಲು ಶಾಸಕರನ್ನ ಬಂಧಿಸ್ತಿದ್ದಾರೆ. ಸಿಎಂ ಕುಮಾರಸ್ವಾಮಿಯವರೇ ಇದು ವಾಮಮಾರ್ಗ. ನೀವು ತನಿಖೆ ಮಾಡಿಸಿ, ಅದನ್ನು ನಾವು ಬೇಡ ಅನ್ನಲ್ಲ. ಆದ್ರೆ ಎಸ್ ಐಟಿಯನ್ನು