ಬೆಂಗಳೂರು: ಉಪಚುನಾವಣೆ ಪ್ರಚಾರದಲ್ಲಿ ಬ್ಯುಸಿಯಾಗಿ ಬಳಲಿದ ಸಿಎಂ ಕುಮಾರಸ್ವಾಮಿ ವೈದ್ಯರ ಸಲಹೆ ಮೇರೆಗೆ ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಮೈಸೂರಿನ ಖಾಸಗಿ ಸ್ಥಳದಲ್ಲಿ ಸಿಎಂ ಕುಮಾರಸ್ವಾಮಿ ರಾಜಕೀಯದ ಹಂಗು ಇಲ್ಲದೇ ಆರಾಮವಾಗಿ ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಇಂದು ಬೆಳಿಗ್ಗೆಯೇ ಖಾಸಗಿ ಸ್ಥಳಕ್ಕೆ ಸಿಎಂ ತೆರಳಿದ್ದಾರೆ.ಸಿಎಂ ಜತೆ ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್ ಗೌಡ ಕೂಡಾ ತೆರಳಿದ್ದಾರೆ. ಚುನಾವಣಾ ಪ್ರಚಾರದ ಹಿನ್ನಲೆಯಲ್ಲಿ ಆರೋಗ್ಯ