ಅರ್ಕಾವತಿ ಲೇಔಟ್ ಡಿನೋಟಿಫಿಕೇಶನ್`ನಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸರ್ಕಾರ ರಚಿಸಿದ್ದ ನ್ಯಾ. ಕೆಂಪಣ್ಣ ನೇತೃತ್ವದ ಸಮಿತಿ ಸರ್ಕಾರದ ಮುಖ್ಯ ಕಾರ್ದರ್ಶಿಗೆ ವರದಿ ಸಲ್ಲಿಸಿದೆ. ಡಿನೋಟಿಫಿಕೇಶನ್ನಿನಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.