ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಗೆ 4 ದಿನ ಬಾಕಿ ಉಳಿದಿರುವಂತೆ ಪರಸ್ಪರ ವಾಕ್ಸಮರ ಸಹ ಜೋರಾಗಿದೆ. ಈ ರಾಜ್ಯವನ್ನ ಎಲ್ಲಿಗೆ ಕೊಂಡೊಯ್ಯುತ್ತಿದ್ದೇವೆ ಎಂಬುದರ ಬಗ್ಗೆ ದೂರಾಲೋಚನೆ ಇಲ್ಲದ ಸರ್ಕಾರವಿದು ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರವನ್ನ ಟೀಕಿಸಿದ್ದ ಮಾಜಿ ಸಿಎಂ ಎಸ್.ಎಂ. ಕೃಷ್ಣಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.