ನಿಮ್ಮ ಕಚ್ಚಾಟದಿಂದ ಬೆಳಗಾವಿ ಮೇಯರ್ ಗಾದಿ ತಪ್ಪಿದೆ ಎಂದು ಜಾರಕಿಹೊಳಿ ಸಹೋದರರ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ. ನಿಮ್ಮ ಭಿನ್ನಮತದಿಂದಾಗಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಮುಖಂಡರು ಅನ್ಯಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಒಂದು ವೇಳೆ, ಹೀಗಾದಲ್ಲಿ ನಿಮಗೂ ನಷ್ಟ, ಪಕ್ಷಕ್ಕೂ ನಷ್ಟವಾಗಲಿದೆ ಎಂದು ಖಾರವಾಗಿ ನುಡಿದಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ, ಮುಂದಿನ ವರ್ಷದಲ್ಲಿ ವಿಧಾನಸಭೆಗೆ