ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ತನ್ನ ಮೊದಲ ಪಟ್ಟಿ ಬಿಡುಗಡೆಗೊಳಿಸಿದ್ದು, ಉಳಿದ ಐದು ಸ್ಥಾನಗಳಿಗೆ ಟಿಕೆಟ್ ಹಂಚಿಕೆ ಬಾಕಿ ಉಳಿಸಿಕೊಂಡಿದೆ.ಈ ಐದು ಸ್ಥಾನಗಳಿಗೆ ಇಂದು ಅಥವಾ ನಾಳೆ ಟಿಕೆಟ್ ಘೋಷಿಸುವ ಸಾಧ್ಯತೆಯಿದೆ. ಮೈಸೂರಿಗೆ ಚುನಾವಣೆ ಪ್ರಚಾರಕ್ಕೆ ತೆರಳುವ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಶೀಘ್ರದಲ್ಲೇ ಉಳಿದ ಸ್ಥಾನಗಳಿಗೂ ಟಿಕೆಟ್ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.ಸರ್ವೆ ಆಧಾರದ ಮೇಲೆ ಟಿಕೆಟ್ ಘೋಷಿಸಿದ್ದೇವೆ. ಟಿಕೆಟ್ ವಿಚಾರದಲ್ಲಿ ಯಾವುದೇ ಬಂಡಾಯವಿಲ್ಲ. ಮೇಲುಕೋಟೆಯಲ್ಲಿ ಪುಟ್ಟಣ್ಣಯ್ಯ