ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕಕ್ಕೆ ಯಾರೂ ಬರಬೇಡಿ ಎಂದು ನಾವು ಹೇಳಲ್ಲ. ಆದರೆ ಬಿಜೆಪಿಯವರು ಬಾಯಿ ಬಿಟ್ಟರೆ ಸುಳ್ಳು ಹೇಳ್ತಾರೆ ಎಂದು ಜನಕ್ಕೂ ಗೊತ್ತಿದೆ. ತೆರಿಗೆ ವಿಚಾರದಲ್ಲೂ ಬರೀ ಸುಳ್ಳು ಹೇಳಿಕೊಂಡೇ ಬಂದಿದ್ದಾರೆ.ಮಹದಾಯಿ ವಿವಾದ ಬಗೆ ಹರಿಸಲು ಸಾಕಷ್ಟು ಬಾರಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇನೆ.