ಬೆಂಗಳೂರು: ಉಡುಪಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರನ್ನು ಹೊಗಳಿದ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.ದೇವೇಗೌಡರನ್ನು ಹಾಡಿ ಹೊಗಳಿದ್ದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಜೆಡಿಎಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿವೆ ಎಂಬುದಕ್ಕೆ ಇದಕ್ಕಿಂತ ಹೆಚ್ಚಿನ ಪುರಾವೆ ಬೇಕಾ? ಎಂದು ಪ್ರಶ್ನಿಸಿದ್ದಾರೆ.ನಾನು ಎರಡು ಕ್ಷೇತ್ರದಲ್ಲಿ ಸ್ಪರ್ಧಿಸುವುದಕ್ಕೆ ಮೋದಿಯವರು ಟೀಕಿಸುತ್ತಾರೆ. ಹಾಗಿದ್ದರೆ ಮೋದಿಯವರು ಲೋಕಸಭೆ ಚುನಾವಣೆಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು ಯಾಕೆ? ಸೋಲಿನ ಭಯದಿಂದಲೇ? ಎಂದು ಸಿಎಂ