ನಗರದ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಕೆಲ ಮತಗಟ್ಟೆಗಳಿಗೆ ಭೇಟಿ ನೀಡಿ, ಮತಗಟ್ಟೆಗಳಲ್ಲಿರಬೇಕಿರುವ ಕನಿಷ್ಟ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್, ಪೀಟೊಪಕರಣಗಳು, ಕಾಯುವ ಕೊಠಡಿ, ಸಹಾಯ ಕೇಂದ್ರ, ಶೌಚಾಯಲ, ರ್ಯಾಂಪ್ ಸೌಲಭ್ಯವಿರಬೇಕು. ಇದೆಲ್ಲವನ್ನೂ ಸರಿಯಾಗಿ ಪರಿಶೀಲನೆ ನಡೆಸಿ ವರದಿ ನೀಡಬೇಕೆಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಸಹಾಯ ಮತದಾರರ ನೋಂದಣಾಧಿಕಾರಿಗಳಿಗೆ ಸೂಚನೆ ನೀಡಿದರು.