ಬಿಜೆಪಿ ಪರಿವರ್ತನಾ ಯಾತ್ರೆಯ ಅವ್ಯವಸ್ಥೆಗೆ ಮಾಜಿ ಸಚಿವ ಆರ್.ಅಶೋಕ್ ಕಾರಣವೆಂದು ಬಿಜೆಪಿ ಮುಖಂಡರೇ ಹೈಕಮಾಂಡ್ಗೆ ದೂರು ನೀಡಿದ್ದಾರೆ. ಬಿಜೆಪಿ ಪರಿವರ್ತನೆ ಯಾತ್ರೆಯಲ್ಲಿ ಎದುರಾದ ಹಲವು ದೋಷಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಮತ್ತು ಆರ್.ಅಶೋಕ್ ನಡುವಿನ ಸಮನ್ವಯದ ಕೊರತೆ ಮೂಲ ಕಾರಣ ಎನ್ನಲಾಗುತ್ತಿದೆ. ಮತ್ತೊಂದೆಡೆ ಕರಂದ್ಲಾಜೆ ಸರ್ವಾಧಿಕಾರಿ ಧೋರಣೆಯಿಂದ ಯಾತ್ರಾ ಕಾರ್ಯಕ್ರಮ ವಿಫಲವಾಗಿದೆ ಎಂದು ಅಶೋಕ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿರಿಯ ನಾಯಕ ಬಿ.ಎಲ್.ಸಂತೋಷ್ ಅವರನ್ನು ಕಾರ್ಯಕ್ರಮದಿಂದ ದೂರವಿಟ್ಟಿರುವುದು ಕೂಡಾ