ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಅಲ್ಲೋಲಕಲ್ಲೋಲ ಸೃಷ್ಟಿಸಿರುವ ಆಪರೇಷನ್ ಕಮಲ ವಿದ್ಯಮಾನದಿಂದಾಗಿ ಸಂಕ್ರಾಂತಿ ಹಬ್ಬದ ಆಚರಣೆಯನ್ನೂ ಕಾಂಗ್ರೆಸ್, ಜೆಡಿಎಸ್ ಮರೆಯುವಂತಾಗಿದೆ.ಮುಂಬೈನ ರೆಸಾರ್ಟ್ ನಲ್ಲಿ ಕೆಲವು ಅತೃಪ್ತ ಶಾಸಕರು ಈಗಾಗಲೇ ಬೀಡು ಬಿಟ್ಟಿದ್ದಾರೆ ಎನ್ನಲಾಗಿದ್ದು, ಇಂದು ಈ ಸಂಖ್ಯೆ ಮತ್ತಷ್ಟು ಹೆಚ್ಚುವ ಸಂಭವವಿದೆ ಎಂಬ ಸುದ್ದಿ ಹಬ್ಬಿದೆ.ಈ ಹಿನ್ನಲೆಯಲ್ಲಿ ದೆಹಲಿಯಿಂದ ದಿಡೀರ್ ಆಗಿ ಬೆಂಗಳೂರಿಗೆ ಆಗಮಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಕಾಂಗ್ರೆಸ್ ನಾಯಕರ ಜತೆ ಸಭೆ ನಡೆಸಲಿದ್ದಾರೆ. ಆಪರೇಷನ್