ಚುನಾವಣೋತ್ತರ ಸಮೀಕ್ಷೆಗೆ ಕಾಂಗ್ರೆಸ್ ಅಸಮಧಾನಗೊಂಡಿದ್ದು, ಯಾವುದೇ ಕಾರಣಕ್ಕೂ ಸಮೀಕ್ಷೆಯನ್ನು ಒಪ್ಪುವುದಿಲ್ಲ ಎಂದು ಹೇಳಿದೆ.ಚುನಾವಣೋತ್ತರ ಸಮೀಕ್ಷೆ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದು, ಈ ಸಮೀಕ್ಷೆಗಳು ವಾಸ್ತವಕ್ಕೆ ಹತ್ತಿರವಾಗಿಲ್ಲ. ನರೇಂದ್ರ ಮೋದಿಯವರು ಅಭಿವೃದ್ಧಿಪರ ಆಡಳಿತ ಕೊಡಲಿಲ್ಲ. ಮೋದಿಯವರು ಪ್ರಚಾರದಲ್ಲೇ ಆಡಳಿತ ಮಾಡಿದ್ದಾರೆ.ಸಾಕಷ್ಟು ಸಮಸ್ಯೆಗಳಿದ್ರೂ ಅವರಿಗೆ ಇಷ್ಟೊಂದು ಅಂಕಿ ಸಂಖ್ಯೆ ತೋರಿಸ್ತಿರೋದು ಆಶ್ಚರ್ಯವಾಗಿದೆ ಎಂದರು. ಎಷ್ಟೋ ಎಕ್ಸಿಟ್ ಪೋಲ್ ಗಳು ನಿಜವಾಗಲ್ಲ. ಮೊನ್ನೆ ಆಸ್ಟ್ರೇಲಿಯದಲ್ಲೂ ಯಾವುದೇ ಎಕ್ಸಿಟ್ ಪೋಲ್ ಸಮೀಕ್ಷೆಗಳು