ಮಂಗಳೂರು: ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಸೋತು ಸುಣ್ಣವಾದ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದಾರೆ.ಕರಾವಳಿ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಅಲ್ಲಿನ ನಾಯಕರಿಗೆ ಪ್ರಮುಖ ಹುದ್ದೆ ನೀಡಿ ಆ ಭಾಗಕ್ಕೆ ಹೆಚ್ಚು ಒತ್ತು ಕೊಡಲು ನಿರ್ಧರಿಸಿದ್ದಾರೆ. ಕೆಪಿಸಿಸಿಯಲ್ಲಿ ಪ್ರಮುಖ ಹುದ್ದೆಗೆ ಕಾಪು ಮೂಲದ ವಿನಯ್ ಕುಮಾರ್ ಸೊರಕೆಯವರನ್ನು ಆಯ್ಕೆ ಮಾಡಲು ರಾಜ್ಯ ಕಾಂಗ್ರೆಸ್ ನಾಯಕರು ಚಿಂತನೆ ನಡೆಸಿದ್ದಾರೆ.ಈ ಮೂಲಕ ಕರಾವಳಿಯಲ್ಲಿ ಮತ್ತೆ ಕೈ ಪಕ್ಷದ ಬಲವರ್ಧನೆಗೆ