ದೇಶದಲ್ಲಿ ಅಮೂಲ್ಗೆ ಸ್ಪರ್ಧೆ ಒಡ್ಡುವ ಮಾದರಿಯಲ್ಲಿ ಕೆಎಂಎಫ್ ಸಂಸ್ಥೆಯನ್ನು ಬೆಳೆಸುತ್ತೇವೆ. ನಂದಿನಿ ವಿಚಾರದಲ್ಲಿ ಕಾಂಗ್ರೆಸ್ ಆರೋಪ ಆಧಾರರಹಿತ ಮತ್ತು ಅವರದು ರೋಗಿಷ್ಠ ಮನಸ್ಥಿತಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಟೀಕಿಸಿದರು.ಮಲ್ಲೇಶ್ವರಂನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಕೆ.ಶಿವಕುಮಾರ್, ಸಿದ್ದರಾಮಯ್ಯ ನಂದಿನಿ ಮುಳುಗಿಸುವ ಟೀಕೆಗೆ ಉತ್ತರಿಸಿದ ಅವರು, ನಂದಿನಿ ಮಾತ್ರವಲ್ಲದೆ ರಾಜ್ಯದ ಹಸುಗಳನ್ನು ರಕ್ಷಿಸುವ ಜವಾಬ್ದಾರಿ ನಮ್ಮದು.