ಬೆಂಗಳೂರು : ಈ ಹಿಂದೆ ಬೊಮ್ಮಾಯಿ ಸರ್ಕಾರದ ವಿರುದ್ಧ ಕಮೀಷನ್ ಬಾಂಬ್ ಹಾಕಿದ್ದ ಗುತ್ತಿಗೆದಾರರ ಸಂಘ ಇದೀಗ ಸಿದ್ದರಾಮಯ್ಯ ಸರ್ಕಾರದ ವಿರುದ್ಧವೂ ತಿರುಗಿಬೀಳುವ ಮುನ್ಸೂಚನೆ ನೀಡಿದೆ. ಜುಲೈ 15ರೊಳಗೆ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಬೀದಿಗಿಳಿಯುವುದಾಗಿ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಕಾಮಗಾರಿಗಳ ಬಿಲ್ ತಡೆಹಿಡಿಯಲಾಗಿತ್ತು. ಕಳೆದ ವಾರ ರಾಜ್ಯ ಗುತ್ತಿಗೆದಾರರ ಸಂಘ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಬಾಕಿ ಬಿಡುಗಡೆಗೆ ಒತ್ತಾಯಿಸಿತ್ತು. ಸಂಘದ ಮನವಿಯನ್ನು ಪುರಸ್ಕರಿಸಿದ