ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮಕ್ಕಳಾಗುವ ಹರಕೆ ಹೊರಲು ಮಹಿಳೆಯರು ಹಿಂದೇಟು ಹಾಕುವಂತಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮುದುಗಾನಕುಂಟೆ ಗ್ರಾಮದ ಶ್ರೀ ಗಂಗಾಭಾಗೀರಥಿ ದೇವಾಲಯವನ್ನು ಸಂಪೂರ್ಣ ಬಂದ್ ಮಾಡಲಾಗಿದೆ.ಗಂಗಾಭಾಗೀರಥಿ ದೇವಾಲಯಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಹೀಗಾಗಿ ಪ್ರತಿ ಸೋಮವಾರ ದೇವಾಲಯಕ್ಕೆ ಬರುತ್ತಿದ್ದ ಭಕ್ತರು ಎಂದಿನಂತೆ ದೇವಾಲಯಕ್ಕೆ ಆಗಮಿಸಿದ್ದರು. ಆದರೆ ದೇವರ ದರ್ಶನ ಸಿಗದೆ ಮರಳಿದ್ದಾರೆ. ಪ್ರವೇಶ ದ್ವಾರಗಳಲ್ಲಿ ದೇವಸ್ಥಾನ ಬಂದ್ ಆಗಿರುವ ನಾಮಫಲಕ