ಕೊರೊನಾ ವೈರಸ್ ನಿಯಂತ್ರಣಕ್ಕೆ ಕಾಲ ಕಾಲಕ್ಕೆ ಸರ್ಕಾರ ನೀಡುವ ಸೂಚನೆ ಆದೇಶಗಳನ್ನು ಪಾಲಿಸಬೇಕು. ಇಲ್ಲದೇ ಇದ್ದಲ್ಲಿ ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಪಕ್ಕಾ ಅಂತ ಡಿಸಿ ಎಚ್ಚರಿಕೆ ನೀಡಿದ್ದಾರೆ. ಕಾರವಾರ ನಗರಸಭಾ ವ್ಯಾಪ್ತಿಯಲ್ಲಿರುವ ವ್ಯಾಪಾರಸ್ಥರಿಗೆ ಕೊರೋನಾ ವೈರಸ್ (ಕೋವಿಡ್-19) ಹರಡದಂತೆ ಮುಂಜಾಗ್ರತೆಗಾಗಿ ಮಾರ್ಚ್ 31 ರ ವರೆಗೆ ರಾಜ್ಯ ಸರ್ಕಾರದ ವತಿಯಿಂದ ಜಿಲ್ಲೆಯಾದ್ಯಂತ ಲಾಕ್ಡೌನ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಕೇವಲ ಜೀವನೋಪಾಯದ ಅತ್ಯಾವಶ್ಯಕ ವಸ್ತುಗಳು ಮಾತ್ರ ಮಾರಾಟಕ್ಕೆ ಅವಕಾಶ