ಬೆಂಗಳೂರು, (ಜು.31): ಕರ್ನಾಟಕದಲ್ಲಿ ಇಳಿಮುಖವಾಗಿದ್ದ ಕೊರೋನಾ ಕೇಸುಗಳ ಸಂಖ್ಯೆ ಮತ್ತೆ ದಿಢೀರ್ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಮಹಾರಾಷ್ಟ್ರ ಹಾಗೂ ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ವಿಶೇಷ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದ್ದು, 72 ಗಂಟೆಯೊಳಗಿನ ಕೋವಿಡ್ ನೆಗೆಟಿವ್ ವರದಿ ತೋರಿಸುವವರಿಗೆ ಮಾತ್ರ ರಾಜ್ಯದೊಳಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಇಂದು (ಶನಿವಾರ) ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆಯಾಗಿದ್ದು,