ಕೋವಿಡ್-19 ಕುರಿತಂತೆ ಜನರ ಆರೋಗ್ಯ ಹಿತದೃಷ್ಟಿಯಿಂದ ಕಾಯಿಲೆಯ ಸ್ಫೋಟ ಮತ್ತು ಹರಡುವುದನ್ನು ತಡೆಗಟ್ಟಲು ಜಿಲ್ಲಾದ್ಯಂತ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಬೀದರ್ ಜಿಲ್ಲೆಯಾದ್ಯಂತ ನಿಷೇದಾಜ್ಞೆ ಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಹೆಚ್.ಆರ್.ಮಹಾದೇವ್ ಅವರು ಆದೇಶ ಹೊರಡಿಸಿದ್ದಾರೆ. ಐದಕ್ಕಿಂತ ಹೆಚ್ಚಿಗೆ ಜನ ಗುಂಪು ಸೇರುವುದು, ಸಂಚರಿಸುವುದು ಮುಂತಾದವುಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಈ ಅವಧಿಯಲ್ಲಿ ಜಿಲ್ಲೆಗೆ ಆಗಮಿಸುವ ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರನ್ನು, ಭಾರತೀಯರನ್ನು (ಯಾವುದೇ ದೇಶಕ್ಕೆ ಭೇಟಿ ನೀಡಿರಲಿ) ಹಾಗೂ ವಿದೇಶಿಯರು ಜಿಲ್ಲೆಗೆ ಆಗಮಿಸುವಾಗ ಅವರಿಗೆ ರೋಗ ಲಕ್ಷಣ ಇಲ್ಲದಿದ್ದರೂ