ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಅನಗತ್ಯ ಮನೆಯಿಂದ ಹೊರಗಡೆ ತಿರುಗಾಡುವುದಾಗಲಿ ಅಥವಾ ದೂರದ ಊರುಗಳಿಗೆ ಪ್ರಯಾಣ ಮಾಡುವುದನ್ನು ನಿಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಶರತ್ ಬಿ. ಅವರು ಜಿಲ್ಲೆಯ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ವಾರ್ತಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅನಗತ್ಯ ಪ್ರಯಾಣಗಳಿಗೆ ಬ್ರೆಕ್ ಹಾಕಲು ಜಿಲ್ಲೆಯೊಳಗಿನ ಸಾರಿಗೆ ಸೇವೆ ಕನಿಷ್ಠ ಗೊಳಿಸಲಾಗುವುದು ಎಂದರು.ಸಾರ್ವಜನಿಕರು ಕೊರೋನಾ ವೈರಸ್ ಕುರಿತು ಭಯಭೀತರಾಗುವ ಅವಶ್ಯಕತೆ ಇಲ್ಲ. ಆದರೆ ಮುನ್ನೆಚ್ಚರಿಕೆ