ಕಾಂಗ್ರೇಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.ಈ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ.ಗುತ್ತಿಗೆದಾರರು ರಾಹುಲ್ ಗಾಂಧಿಗೂ ಟ್ವೀಟ್ ಮಾಡಿದಾರೆ.ನಿಮ್ಮವರು 40+15% ಕಮೀಷನ್ ಕೇಳ್ತಿದಾರೆ ಅಂತ ರಾಹುಲ್ ಗಾಂಧಿಗೆ ಟ್ವೀಟ್ ಮಾಡಿದಾರೆ.ಈಗ ರಾಹುಲ್ ಗಾಂಧಿ ಮಧ್ಯಪ್ರವೇಶ ಮಾಡಬೇಕಿದೆ.ನಿನ್ನೆ ರಾಹುಲ್ ಗಾಂಧಿ ಭ್ರಷ್ಟಾಚಾರ ಬಗ್ಗೆ ಮಾತಾಡಿದ್ರಲ್ಲ, ಇಲ್ಲಿ ರಾಜ್ಯದಲ್ಲಿ ಅವರ ಸರ್ಕಾರವೇ ಭ್ರಷ್ಟಾಚಾರ ಮಾಡ್ತಿದೆ.ರಾಹುಲ್ ಗಾಂಧಿ ಮಧ್ಯಪ್ರವೇಶ ಮಾಡಲಿ ಅಂತ ಆಗ್ರಹಿಸುತ್ತೇನೆ ಅಂತಾ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.