ಬೆಂಗಳೂರು: ಇಂದು ಸಮನ್ವಯ ಸಮಿತಿ ಸಭೆ ನಡೆಯಲಿರುವ ಹಿನ್ನಲೆಯಲ್ಲಿ ಡಿಸಿಎಂ ಡಾ ಜಿ ಪರಮೇಶ್ವರ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.ಸಮನ್ವಯ ಸಮಿತಿಯಲ್ಲಿ ತೀರ್ಮಾನವಾದಂತೆ ಕಾಂಗ್ರೆಸ್ ಗೆ 30 ಸ್ಥಾನಗಳ ಹಂಚಿಕೆಯಾಗಬೇಕು. ಈ ಸ್ಥಾನಗಳ ಹಂಚಿಕೆ ಕುರಿತಂತೆ ವೇಣುಗೋಪಾಲ್ ಜತೆ ಡಿಸಿಎಂ ಚರ್ಚಿಸಲಿದ್ದಾರೆ ಎನ್ನಲಾಗಿದೆ.ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ, ಸಚಿವ ಸ್ಥಾನಗಳ ಕುರಿತಂತೆ ವೇಣುಗೋಪಾಲ್ ಜತೆ ಚರ್ಚಿಸಿ ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಕೆಪಿಸಿಸಿ