ಬೆಂಗಳೂರು : ರಾಜ್ಯದ ಕೆಲವು ಕುಗ್ರಾಮ, ಹಳ್ಳಿಗಳಲ್ಲಿ ಶೂನ್ಯ ಕೊರೋನಾ ಪಾಸಿಟಿವ್ ಪ್ರಕರಣಗಳಿದ್ದು ಅಂತಹ ಕಡೆಗಳಲ್ಲಿ ಶಾಲೆಗಳನ್ನು ಆರಂಭ ಮಾಡುವಂತೆ ಸಾರ್ವಜನಿಕರು, ಶಿಕ್ಷಕರು, ಪೋಷಕರು ಬೇಡಿಕೆಯಿಟ್ಟ ಹಿನ್ನೆಲೆಯಲ್ಲಿ ಇಂದು 6ರಿಂದ 8ನೇ ತರಗತಿಯವರೆಗೆ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.