ಮುಖ್ಯಮಂತ್ರಿ ಸಿದ್ದರಾಮಯ್ಯ ನೀರಾವರಿ ವಿಷಯದಲ್ಲಿ ಡೋಂಗಿ ವ್ಯವಹಾರ ಬಿಟ್ಟು ನನ್ನ ಜತೆ ಹೋರಾಟಕ್ಕೆ ಬರಲಿ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸವಾಲು ಹಾಕಿದ್ದಾರೆ. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾವೇರಿ ಹೋರಾಟಕ್ಕೆ ಸಿದ್ದರಾಮಯ್ಯ ಕರೆದ ಕಾರಣಕ್ಕೆ ನಾನು ಹೋಗಿಲ್ಲ. ಸ್ವಯಂ ಪ್ರೇರಿತವಾಗಿ ಹೋಗಿದ್ದೆ. ನೆಲ, ಜಲ ವಿಷಯದಲ್ಲಿ ದೇವೇಗೌಡ ಪಕ್ಷಾತೀತ ಹೋರಾಟಕ್ಕೆ ಸದಾ ಸಿದ್ದನಾಗಿರುತ್ತೇನೆ ಎಂದಿದ್ದಾರೆ. ನೀರಾವರಿ ವಿಷಯದಲ್ಲಿ