ಚಾಮರಾಜನಗರ: ಕರೊನಾ ಲಸಿಕೆ ಹಾಕಿಸಿಕೊಂಡಿಲ್ಲದವರಿಗೆ ರೇಷನ್ ಮತ್ತು ಪೆನ್ಷನ್ ಸಿಗಲ್ಲ ಎಂದು ಆದೇಶ ಹೊರಡಿಸಿದ್ದ ಚಾಮರಾಜನಗರ ಡಿಸಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಚಾಮರಾಜನಗರದಲ್ಲಿ ಬಿಜೆಪಿ ಸರ್ಕಾರ ಹೇಳುತ್ತೆ ಕೋವಿಡ್ ಲಸಿಕೆ ಪಡೆಯದಿದ್ರೆ ಪಡಿತರ, ಪಿಂಚಣಿ ಎರಡೂ ಇಲ್ಲ ಅಂತ. ಆದ್ರೆ, ಲಸಿಕೆಗಳು ಜನಸಂಖ್ಯೆಗೆ ಸಾಕಾಗುವಷ್ಟು ಇವೆಯಾ? ಲಸಿಕೆ ಪಡೆಯುವಂತೆ ಜನರ ಮನವೊಲಿಸಿದ್ದಾರಾ? ಮೂಲ ಸೌಕರ್ಯಗಳಾದ ಆಹಾರ ಮತ್ತು ಪಿಂಚಣಿ ನೀಡುವುದಿಲ್ಲ ಅಂತ ಹೆದರಿಸುವುದು ಅಕ್ರಮ, ಅನೈತಿಕ ಹಾಗೂ