ಬೆಂಗಳೂರು: ಸದ್ಯದಲ್ಲೇ ಇಂಧನ ಸಚಿವ ಡಿಕೆ ಶಿವಕುಮಾರ್ ರಾಜೀನಾಮೆ ನೀಡುವ ಪರಿಸ್ಥಿತಿ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಮುರುಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸಚಿವ ಡಿಕೆಶಿ ಮನೆ ಮೇಲೆ ಐಟಿ ದಾಳಿ ನಡೆದಿದೆ. ಅವರ ಕುಟುಂಬದವರನ್ನೂ ವಿಚಾರಣೆ ನಡೆಸಲಾಗಿದೆ. ಸಾಕಷ್ಟು ಅಕ್ರಮ ಆಸ್ತಿ ಪತ್ತೆಯಾಗಿದೆ. ಐಟಿ ಇಲಾಖೆ ಈ ಪ್ರಕರಣವನ್ನು ಜಾರಿ ನಿರ್ದೇಶನಾಲಯಕ್ಕೆ ವರ್ಗಾಯಿಸಬಹುದು. ಆಗ ಅನಿವಾರ್ಯವಾಗಿ ಅವರೇ ರಾಜೀನಾಮೆ ನೀಡಬೇಕಾಗಬಹುದು ಎಂದು ಯಡಿಯೂರಪ್ಪ