ಬೆಂಗಳೂರು: ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಹೆಚ್1ಎನ್1 ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ ಹೈದ್ರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಇದೀಗ ಇವರ ಅಕಾಲಿಕ ಮರಣಕ್ಕೆ ಸಚಿವ ಡಿಕೆ ಶಿವಕುಮಾರ್ ಸಂಶಯ ವ್ಯಕ್ತಪಡಿಸಿದ್ದಾರೆ. ಮಧುಕರ್ ಶೆಟ್ಟಿ ಅವರ ಸಾವಿಗೆ ಸಂತಾಪ ಸೂಚಿಸಿ ಪ್ರತಿಕ್ರಿಯೆ ನೀಡಿದ ಅವರು, ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ಮಧುಕರ್ ಶೆಟ್ಟಿ ಅವರ ಸಾವು ಸಹಜವಾಗಿದೆಯೇ, ಅಸಹಜ ಸಾವೇ ಎಂಬ ಬಗ್ಗೆ ತನಿಖೆ ಮಾಡುವ