ಕುಡಿದು ವಾಹನಗಳನ್ನು ಚಲಾಯಿಸುವ ವ್ಯಕ್ತಿಗಳಿಂದ ಪೊಲೀಸರು ದಂಡ ವಿಧಿಸುತ್ತಾರೆ. ಅದು ಕಾನೂನು. ಆದರೆ ಇಲ್ಲೊಬ್ಬ ಪೊಲೀಸ್ ಕುಡಿದು ವ್ಯಾನ್ ಚಲಾಯಿಸಿದ್ದಾನೆ. ಅಷ್ಟೇ ಅಲ್ಲ ಸರಣಿ ಅಪಘಾತ ಮಾಡಿದ್ದಾನೆ. ಪೊಲೀಸಪ್ಪನ ಈ ನಡೆಗೆ ಸಾರ್ವಜನಿಕರು ಛೀಮಾರಿ ಹಾಕಿದ್ದಾರೆ. ಕೆ.ಎಸ್.ಆರ್.ಪಿ ಪೊಲೀಸಪ್ಪ ಕುಡಿದ ಮತ್ತಿನಲ್ಲಿ ಇಲಾಖೆಯ ವ್ಯಾನ್ ನ್ನು ಅಡ್ಡಾದಿಡ್ಡಿ ಚಲಾಯಿಸಿದ್ದಾನೆ. ಅಷ್ಟೇ ಅಲ್ಲ ಸರಣಿ ಅಪಘಾತಕ್ಕೆ ಕಾರಣವಾದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸಿಂಗಸಂದ್ರ ಬಳಿ ನಡೆದಿದೆ. ಹೊಸೂರು ಮುಖ್ಯರಸ್ತೆಯ